ದಿನಕ್ಕೊಂದು ಕಥೆ. 157

🌻🌻 *ದಿನಕ್ಕೊಂದು ಕಥೆ*🌻🌻

ಒಬ್ಬ ರಾಜ ಮತ್ತು ಮಂತ್ರಿ ಕಾಡಿನಲ್ಲಿ ಬೇಟೆಗೆಂದು ಹೋಗ್ತಾ ಇರ್ತಾರೆ  .

ಮಾರ್ಗ ಮದ್ಯೆ ರಾಜ ಎಡವಿ ಬೀಳ್ತಾನೆ .ಎಡಗಾಲಿನ ಹೆಬ್ಬೆರಳ ಉಗುರು ಕಿತ್ತು ರಕ್ತ ಸುರಿಯೋಕೆ ಶುರುವಾಗುತ್ತೆ . ರಾಜ ಮಂತ್ರಿಯನ್ನು ಕರೆದು ನೋವಿನಿಂದ ತೋರಿಸುತ್ತಾನೆ ತನಗಾದ ಸ್ಥಿತಿಯನ್ನು .
  ಮಂತ್ರಿ ಏನು ಆಗಿಯೇ ಇಲ್ಲವೇನೋ ಅನ್ನೋ ಹಾಗೆ ವರ್ತಿಸುತ್ತ ಬನ್ನಿ  ಪ್ರಭುಗಳೇ  ಆಗೋದೆಲ್ಲ ಒಳ್ಳೆಯದಕ್ಕೆ ಅಂತ ಹೇಳ್ತಾನೆ .ರಾಜ ಕೆಂಡಮಂಡಲನಾಗಿ ...ನಕ್ಕನ್ ನಾನು ರಾಜ ನನ್ನ ಕಾಲು  ಕಿತ್ತು ರಕ್ತ ಸುರಿದರೆ ಒಳ್ಳೆಯದಕ್ಕೆ ಅಂತಿಯ ನನ್ನ ಅನ್ನ  ತಿಂದು  ನಿನ್ನಂತ ಮಂತ್ರಿಯ ಅವಶ್ಯಕತೆ ನನಗಿಲ್ಲ ಎಂದು ಅಲ್ಲೇ ಪಕ್ಕದಲ್ಲ್ಲಿದ್ದ ಹಾಳು ಬಾವಿಗೆ  ಆತನನ್ನು ತಳ್ಳಿ ಮುಂದಕ್ಕೆ ಸಾಗುತ್ತಾನೆ  .

ಕೆಲವೇ ಪರ್ಲಾಂಗು ತಲುಪುವಷ್ಟರಲ್ಲಿ ಕಾಡಿನ ಜನರ ಗುಂಪೊಂದು  ರಾಜನನ್ನು  ಸುತ್ತುವರೆದು ಹೊತ್ತೊಯ್ಯುತ್ತಾರೆ.ಆ ದಿನ ಕಾಡಿನ ದೇವಿಯ ಉತ್ಸವ ಇದ್ದು ದೇವಿಗೆ ನರಬಲಿ ಕೊಡಲು ಮನುಷ್ಯರನ್ನು ಹುಡುಕಿಕೊಂಡು ಬಂದಿದ್ದ ಕಾಡಿನ ಜನಗಳ ಕೈಗೆ ಒಂಟಿಯಾಗಿದ್ದ ರಾಜ ಅನಾಯಾಸವಾಗಿ ಸಿಕ್ಕಿ ಬಿಟ್ಟಿದ್ದ .

ಸರಿ ಬಲಿ ಪೂಜೆ ಮಾಡಿ ಇನ್ನೇನು ರಾಜನನ್ನು ಕಡಿಯಬೇಕು ಕತ್ತಿ  ಎತ್ತಿದವನಿಗೆ ರಾಜನ ಕಾಲ ಬೆರಳಲ್ಲಿ ರಕ್ತ ಒಸರುವುದು ಕಂಡಿತು .ಅವರ ಸಂಪ್ರದಾಯದ ಪ್ರಕಾರ ಅದಾಗಲೇ  ಊನವಾಗಿರುವ ಅಥವಾ ರಕ್ತ ಸ್ರಾವ ಆಗುತ್ತಿರುವ ಪ್ರಾಣಿ ಬಲಿ ನೀಡುವಂತಿಲ್ಲ .ಬೇಸರದಿಂದ ರಾಜನನ್ನು ಬಿಟ್ಟು ಕಳುಹಿಸುತ್ತಾರೆ .

ಖುಷಿ ಇಂದ ಬದುಕಿದೆಯ ಬಡ ಜೀವ ಎಂದು ಹಿಂತಿರುಗಿ ಬರುವಾಗ ಮಂತ್ರಿ ಹೇಳಿದ ಮಾತು ನೆನಪಾಗುತ್ತೆ  ಹೌದು ಗಾಯ ಆಗಿದ್ದು ಒಳ್ಳೆಯದೇ ಆಯಿತು ಇಲ್ಲ ನನ್ನನ್ನು  ಕತ್ತರಿಸಿ ಬಿಡುತ್ತಿದ್ದರು ಎಂದು ತಿಳಿದು ಮಂತ್ರಿಯ ರಕ್ಷಣೆಗೆ ಧಾವಿಸುತ್ತಾನೆ .ಮತ್ತು ಮಂತ್ರಿಯನ್ನು ಹಾಳು ಬಾವಿ ಇಂದ ಮೇಲಕ್ಕೆತ್ತಿ ನಡೆದ ಘಟನೆ ವಿವರಿಸಿ  ದಯವಿಟ್ಟು ನನ್ನನ್ನು ಕ್ಷಮಿಸಿ ಮಂತ್ರಿಗಳೇ ಎಂದು ವಿನಮ್ರವಾಗಿ ಕ್ಷಮೆ ಯಾಚಿಸುತ್ತಾನೆ .

ಮಂತ್ರಿ ಸಮಾಧಾನ ಚಿತ್ತದಿಂದ ಅಯ್ಯೋ ಅದಕ್ಕೇಕೆ ಕ್ಷಮೆ ಪ್ರಭುಗಳೇ ಆಗೋದೆಲ್ಲ ಒಳ್ಳೇದಕ್ಕೆ ನೀವು ನನ್ನನ್ನು ಹಾಳು ಬಾವಿಗೆ ತಳ್ಳಿದ್ದು ಕೂಡ ಒಳ್ಳೆಯದಕ್ಕೆ ಎನ್ನುತ್ತಾನೆ .
ರಾಜ ಆಶ್ಚರ್ಯದಿಂದ ಮಂತ್ರಿ ಕಡೆ ನೋಡುತ್ತಾನೆ .ಮಂತ್ರಿ ಮಾತು ಮುಂದುವರೆಸಿ

  "" ಪ್ರಭುಗಳೇ  ನೀವು ನನ್ನನ್ನು ಇಲ್ಲಿ ತಳ್ಳಿದ್ದಕ್ಕೆ ನಾನು ನಿಮ್ಮ ಜೊತೆ ಬರಲಾಗಲಿಲ್ಲ .ನಾನು ನಿಮ್ಮ ಜೊತೆ ಬಂದಿದ್ದರೆ  ಗಾಯವಾದ ನಿಮ್ಮನ್ನು ಬಿಟ್ಟು ಏನು ಆಗದ ನನ್ನನ್ನು ಬಲಿ ಕೊಡುತ್ತಿದ್ದರು ."

ನಾನು ಸಂತೋಷವಾಗಿದ್ದೇನೆ ಇರುತ್ತೇನೆ ಕಾರಣ 
ನಾನು ಪ್ರತಿ ಕ್ಷಣ ಪ್ರತಿ ಸೋಲು ಪ್ರತಿ ಅಪಘಾತ ಪ್ರತಿ ಎಡವು ಪ್ರತಿ ಅವಮಾನ ಪ್ರತಿ ಆಘಾತಗಳಲ್ಲಿಯೂ ಯೋಚಿಸುವುದು ಇದನ್ನೇ ..ಎಲ್ಲಿಯೋ ಮುಂದಾಗಬಹುದಿದ್ದ ದೊಡ್ಡ ಅಪಘಾತ ತಡೆಯಲು ಇದಾಗಿರಬಹುದು ಎಂದು .....ಮಿಕ್ಕಿದ್ದು ನಿಮ್ಮಿಚ್ಚೆ.            ಕೃಪೆ :ನೆಟ್.                                         ಸಂಗ್ರಹ : ವೀರೇಶ್ ಅರಸಿಕೆರೆ ದಾವಣಗೆರೆ

Comments

Popular posts from this blog

ದಿನಕ್ಕೊಂದು ಕಥೆ 1031

ದಿನಕ್ಕೊಂದು ಕಥೆ 1055

ದಿನಕ್ಕೊಂದು ಕಥೆ 1059