Posts

Showing posts from November, 2017

ದಿನಕ್ಕೊಂದು ಕಥೆ. 631

*🌻ದಿನಕ್ಕೊಂದು ಕಥೆ🌻                                         ಸಿರಿಯ ಅಸಲಿ ಬೆಲೆ ಎಷ್ಟು?* ಇಂದಿದ್ದು ನಾಳೆ ಇಲ್ಲದಂತಾಗುವ ಈ ನಶ್ವರ ಪ್ರಪಂಚದ ಮೋಹವನ್ನು ಅಳೆದವರು ಸಂತರು, ಶರಣರು, ಮಹಂತರು. ಅವರಿಗೆ ಈ ಪ್ರಪಂಚದ ಸಿರಿ ಸಂಪದವೆಲ್ಲವೂ ಒಂದು ಹುಲ್ಲುಕಡ್ಡಿಯಂತೆ. ನಮಗಾದರೂ ಈ ಪ್ರಪಂಚವೇ ಸರ್ವಸ್ವ. ಧನಕನಕಾದಿಕಗಳಿಗಾಗಿ ನಾವು ಪ್ರಾಣ ಪಣಕ್ಕಿಟ್ಟು ಹೋರಾಡುತ್ತೇವೆ. ಅಮೂಲ್ಯವಾದ ಆಯುಷ್ಯವನ್ನು ವ್ಯರ್ಥ ಕಳೆಯುತ್ತೇವೆ. ಒಂದು ಗೇಣು ಭೂಮಿಗಾಗಿ ಮಹಾಭಾರತದಂಥ ಘನಘೋರ ಯುದ್ಧವೇ ನಡೆಯಿತು. ಅಣ್ಣ-ತಮ್ಮಂದಿರಾದ ಕೌರವರು, ಪಾಂಡವರು ಬದ್ಧ ವೈರಿಗಳಂತೆ ಹೋರಾಡಿ ಮಡಿದರು. ಒಂದು ಕ್ಷಣ ರೂಪದ ಆಕರ್ಷಣೆ ಒಳಗಾಗಿ ರಾಮಾಯಣ ನಡೆದುಹೋಯಿತು. ಸುಂದರವಾದ ಲಂಕಾ ಪಟ್ಟಣ ಬೂದಿಯಾಯ್ತು. ಮಹಾ ಶಿವಭಕ್ತನಾದ ರಾವಣ ಅಸುನೀಗಿದೆ. ಅಪಾರ ಜೀವಹಾನಿ ಸಂಭವಿಸಿತು. ಇಂಥಾ ನಶ್ವರ ಸಂಪತ್ತಿನ ಮೋಹವು ಸಂತರು, ಶರಣರ ಬಳಿ ಎಂದೂ ಸುಳಿಯಲಿಲ್ಲ. ಚೀನಾ ದೇಶದ ಸಂತ ಲಾವೋತ್ಸೆ ನಾವೆಯಲ್ಲಿ ಕುಳಿತು ನದಿ ದಾಟುತ್ತಿದ್ದ . ಅದೇ ನಾವೆಯಲ್ಲಿ ಒಬ್ಬ ಸಿರಿವಂತನಿದ್ದ . ಸಂತನನ್ನು ಕಂಡು ವಂದಿಸಿ ಚಿನ್ನದ ಸರವನ್ನು ಕಾಣಿಕೆಯಾಗಿ ಕೊಟ್ಟ. ತಕ್ಷಣ ಸಂತ ಆ ಸರವನ್ನು ನದಿಗೆ ಎಸೆದ. ಸಿರಿವಂತನು ನೀರಿಗಿಳಿದು ಅದನ್ನು ತಂದ. 'ಸಂತರೆ ಇದು ಚಿನ್ನದ ಸರ. ಇದರ ಬೆಲೆ ಎಷ್ಟು ನಿಮಗೆ ಗೊತ್ತೇ?' ಎಂದು ಕೇಳಿದ. ಸಂತ ಲಾವೋತ್ಸೆ ಹೇಳಿದ, ''ಅದರ ಬೆಲೆ ನಿನ್ನನ್ನು ನೀರಿಗೆ ಜಿಗ

ದಿನಕ್ಕೊಂದು ಕಥೆ. 630

🌻🌻 *ದಿನಕ್ಕೊಂದು ಕಥೆ*    *ಯಜಮಾನನ ಗುಣ ಶಿಷ್ಯನಲ್ಲಿ*    ಬಹಳ ವರ್ಷಗಳ ಹಿಂದೆ ಕಾಶಿಯ ರಾಜ ಬ್ರಹ್ಮದತ್ತನಾಗಿದ್ದ. ಆತ ತಾರುಣ್ಯ­ದಲ್ಲೇ ಪಟ್ಟಕ್ಕೇರಿದವನು. ಆತ ಧರ್ಮಜ್ಞ. ಅವನಿಗೆ ಸಕಲ ವಿದ್ಯೆಗಳೂ ಕರ­ತ­ಲಾಮಲಕವಾಗಿದ್ದವು. ಆತನ.  ಮಾತು, ನಡೆ ಅತ್ಯಂತ ನಯ. ಅವನ ಬಾಯಿಯಿಂದ ತಪ್ಪು ಮಾತುಗಳು ಬರುವುದೇ ಸಾಧ್ಯವಿರಲಿಲ್ಲ.  ಅವನ ಕರುಣೆ, ನ್ಯಾಯಪರತೆ, ಜನಪ್ರೀತಿ ದಂತಕಥೆಗಳೇ ಆಗಿದ್ದವು. ಅವನ ರಾಜ್ಯದಲ್ಲಿ ಕಳವು, ಅಪರಾಧಿಗಳೇ ಇರಲಿಲ್ಲ. ನ್ಯಾಯಾಧೀಶರಿಗೆ, ಶಿಸ್ತು­ಪಾಲನೆ ಮಾಡುವ ಸೈನಿಕರಿಗೆ ಯಾವ ಕೆಲಸವೂ ಇರಲಿಲ್ಲ. ಸಮಾಜದಲ್ಲಿ ಅತ್ಯಂತ ಶಾಂತಿ ಇತ್ತು.ಬ್ರಹ್ಮದತ್ತ ಇಷ್ಟಾದರೂ ತನ್ನಲ್ಲಿ ಯಾವುದಾದರೂ ದುರ್ಗುಣವಿದೆಯೇ ಎಂದು ಪರೀಕ್ಷಿಸಿ­ಕೊಳ್ಳುತ್ತಿದ್ದ. ಆಸ್ಥಾನದಲ್ಲಿ ಯಾರನ್ನು ಕೇಳಿದರೂ ಅವರು ಅವನಲ್ಲಿ ಒಂದು ಕೆಟ್ಟಗುಣವನ್ನೂ ಹೇಳಲಿಲ್ಲ. ಅವರು ಹೆದರಿಕೆಯಿಂದ ಹೇಳಿರಲಿ­ಕ್ಕಿಲ್ಲ­ವೆಂದುಕೊಂಡು ವೇಷ ಮರೆಸಿಕೊಂಡು ತನ್ನ ದೇಶದ ಹಳ್ಳಿಹಳ್ಳಿಗಳಲ್ಲಿ ಸಂಚರಿ­ಸಿದ. ಅಲ್ಲಿಯೂ ಸಾಮಾನ್ಯರನ್ನು ಪ್ರಶ್ನಿಸಿದ. ಅವರಲ್ಲಿ ಒಬ್ಬರೂ ರಾಜನ ಒಂದು ದುರ್ಗುಣವನ್ನೂ ಹೇಳಲಿಲ್ಲ. ಬದಲಾಗಿ ಅವನನ್ನು ದೇವರೆಂದೇ ಭಾವಿಸುವು-ದಾಗಿ ಹೇಳಿದರು. ಬ್ರಹ್ಮದತ್ತ ಅಂದಿನ ಕಾಲದ ಮಹಾಜ್ಞಾನಿ ಎಂದು ಹೆಸರಾದ ವಿಷ್ಣುಗೋಪನನ್ನು ಕಂಡು ತನ್ನಲ್ಲಿ ಯಾವುದಾದರೂ ದೋಷವಿದ್ದರೆ ತಿಳಿಸಿ ಅದನ್ನು ಕಳೆದುಕೊಳ್ಳುವ ವಿಧಾನ­ವನ್ನು ಹೇಳಲು ಕೇಳಿಕೊಂಡ. ಇದೇ ರೀತಿಯ ಪರಿಸ್ಥಿತಿ ಕೋ

ದಿನಕ್ಕೊಂದು ಕಥೆ. 629

*🌻ದಿನಕ್ಕೆ ಇನ್ನೊಂದು ಕಥೆ🌻                                            ಯಾಕೆ ತಂದೆ ಹೀಗೆ* ಕೃಪೆ: e-book 3 group. ಮಗ ಶಾಲೆಗೆ ಹೋಗುತಿದ್ದ , ಅದ್ಯಾಪಕರು ಕೊಟ್ಟ ಹೋಂ ವರ್ಕ್ ಮಾಡಿದ್ದೀಯಾ ಎಂದು ತಂದೆ ಕೇಳಿದರು ಆಯ್ತು ಎಂದು ಮಗನು ಉತ್ತರಿಸಿದ ಎಲ್ಲಾ ಕಾರ್ಯದಲ್ಲೂ  ತಂದೆ ಮಗನನ್ನು ಪ್ರಶ್ನಿಸುತ್ತಿದ್ದರು. ಗೇಟ್ ತೆರೆದು ಬಿಟ್ಟು ಹೋದರೆ ಗೇಟ್ ಹಾಕಿ ಹೋಗೆಂದೂ  ಪೈಪಲ್ಲಿ ನೀರಿನ ಹನಿಗಳು ಬೀಳುತ್ತಿದ್ಧರೆ ಪೈಪ್ ಸರಿಯಾಗಿ ಬಂದ್ ಮಾಡೆಂದೂ, ಫ್ಯಾನ್ ಸ್ವಿಚ್ ಆನ್ ಮಾಡಿ ಆಫ್ ಮಾಡದೆ  ಹೋದರೆ ಸುಮ್ಮನೆ ಯಾಕೆ ಫ್ಯಾನ್ ಕರಗಿಸ್ತೀಯ, ನೆನೆದ ಬಟ್ಟೆಯನ್ನು ಬೆಡ್ ಶೀಟ್ ಮೇಲೆ ಇಟ್ಟರೆ ನಿನ್ನ ಬಟ್ಟೆಯಿಂದ ಬೆಡನ್ನೂ ನೆನೆಸ್ತೀಯ ಎಂದೆಲ್ಲ ಹೇಳಿ ಗದರಿಸುತ್ತಿದ್ದರು ತಂದೆಯ ಮಾತನ್ನು ಕೇಳಿ ಕೇಳಿ ಬೆಳೆದ ನಿಂತ ಮಗನಿಗೆ  ತಂದೆಯ ಮಾತು ಕಿರಿಕಿರಿಯಾಗತೊಡಗಿತು ಎಲ್ಲ ವಿಷಯದಲ್ಲೂ ನನಗೆ ಕಿರಿಕಿರಿ ಮಾಡುವ ತಂದೆಯಿಂದ ದೂರವಾಗಬೇಕೆಂದು ಚಿಂತಿಸಿದ ಆದರೆ  ಯಾವ ಕೆಲಸವಿಲ್ಲದೆ ತಂದೆಯಿಂದ ದೂರವಾದರೆ ಗತಿಯೇನೆಂದು ಚಿಂತಿಸಿದ ಎಷ್ಟು ಗದರಿಸಿದರೂ ಬೇಕಾದದ್ದನ್ನು ಕೊಡುತ್ತಿದ್ದರು    ಅದೊಂದು ದಿನ ಇಂಟರ್ವ್ಯೂಗೆ ಕರೆ ಬಂತು  ಒಳ್ಳೆಯ ಸ್ಯಾಲರಿ ಇರುವ ಜೋಬ್ . ಜೋಬ್ ಸಿಕ್ಕದರೆ ಜೀವಿಸಲು ಚಿಂತೆಯಿಲ್ಲ ಆಗಲೇ ತೀರ್ಮಾನಿಸಿದ ನಾನು ಈ ಕೆಲಸಕ್ಕೆ ಸೇರಿ ಒಳ್ಳೆಯ ಸಂಪತ್ತು ಗಳಿಸಿ ಶತ್ರುವಾದ ತಂದೆಯಿಂದ ದೂರವಾಗ ಬೇಕು ಇನ್ನು ಮುಂದೆ ನನ್ನ ತಂಟೆಗ

ದಿನಕ್ಕೊಂದು ಕಥೆ. 628

🌻🌻 *ದಿನಕ್ಕೊಂದು ಕಥೆ*🌻🌻 *ಇದು ನಿಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ* ಗುರುಕುಲದಲ್ಲಿ ಓದುತ್ತಿದ್ದ  ಶಿಷ್ಯರು ಒಮ್ಮೆ ತಮ್ಮ ಗುರುಗಳ ಬಳಿ ಬಂದು, "ಗುರುಗಳೇ ನಾವೆಲ್ಲಾ ತೀರ್ಥಯಾತ್ರೆ ಮಾಡಬೇಕು ಎಂದುಕೊಂಡಿದ್ದೇವೆ. ತಾವು ಸಮ್ಮತಿಸಿದರೆ ಪುಣ್ಯಕ್ಷೇತ್ರಗಳಿಗೆ ತೆರಳಿ ಪವಿತ್ರ ಸ್ನಾನ ಮಾಡಿ ದೇವರ ದರ್ಶನ ಮಾಡಿ ಬರುತ್ತೇವೆ" ಎಂದು ಹೇಳಿ ಯಾತ್ರೆಗೆ ಅನುಮತಿ ಕೋರಿದರು. ನೀವು ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಉದ್ದೇಶವೇನು? ಎಂದು ಗುರುಗಳು ತಮ್ಮ ಶಿಷ್ಯರಿಗೆ ಕೇಳಿದರು. ಇದಕ್ಕೆ ಉತ್ತರಿಸಿದ ಶಿಷ್ಯರು, "ಗುರುಗಳೇ ನಾವು ಅಂತರಂಗಶುದ್ಧಿಗಾಗಿ ತೀರ್ಥಯಾತ್ರೆ ಮಾಡುತ್ತಿದ್ದೇವೆ" ಎಂದು ತಿಳಿಸಿದರು. "ಸಂತೋಷ ಹೋಗಿಬನ್ನಿ ಶುಭವಾಗಲಿ" ಎಂದ ಗುರುಗಳು, ಯಾತ್ರೆಗೆ ಹೊರಟ ಶಿಷ್ಯರೆಲ್ಲರಿಗೂ ಒಂದೊಂದು ಹಾಗಲಕಾಯಿ ಕೊಟ್ಟು, "ಈ ಕಾಯನ್ನೂ ನಿಮ್ಮ ಜೊತೆ ತೆಗೆದುಕೊಂಡು ಹೋಗಿ, ನೀವು ಎಲ್ಲೆಲ್ಲಿ ಸ್ನಾನ ಮಾಡುತ್ತೀರೋ ಅಲ್ಲಿ ಈ ಹಾಗಲ ಕಾಯಿಗೂ ಸ್ನಾನ ಮಾಡಿಸಿ. ನೀವು ಎಲ್ಲೆಲ್ಲಿ ದೇವರ ದರ್ಶನ ಪಡೆಯುತ್ತೀರೋ ಅಲ್ಲಿ ದೇವರ ಪಾದದ ಬಳಿ ಈ ಕಾಯಿಗಳನ್ನು ಇಟ್ಟು ಪೂಜೆ ಮಾಡಿಸಿಕೊಂಡು ಬನ್ನಿ" ಎಂದು ತಿಳಿಸಿದರು. ಸರಿ ಎಂದ ಶಿಷ್ಯರು ಹಾಗಲಕಾಯಿಯ ಜೊತೆ ಯಾತ್ರೆ ಹೊರಟು ಒಂದು ವಾರದ ಬಳಿಕ ಹಿಂತಿರುಗಿದರು. ಶಿಷ್ಯರನ್ನು ಕಂಡ ಗುರುಗಳು, "ಏನು ಕ್ಷೇತ್ರ ದರ್ಶನದಿಂದ ನೀವೆಲ್ಲ ಪುನೀತರಾದಿರಾ ನಿಮ್ಮ

ದಿನಕ್ಕೊಂದು ಕಥೆ. 627

🌻🌻 *ದಿನಕ್ಕೊಂದು ಕಥೆ*🌻🌻 *ಬದುಕು ಧೈರ್ಯಕ್ಕೆ ಕಾರಣ*   ದಟ್ಟವಾದ ಕಾಡಿನಲ್ಲಿನ ಸರೋವರದ ಬದಿಯಲ್ಲಿ ಸಾವಿರಾರು ಮೊಲಗಳು ವಾಸ­ವಾ­ಗಿ­ದ್ದವು. ಅವುಗಳಿಗೆ ಅಲ್ಲಿ ಬೇಕಾದಷ್ಟು ಆಹಾರ ಸಿಗುತ್ತಿತ್ತು.   ಅವುಗಳ ಪರಿ­ವಾರ ದಿನದಿಂದ ದಿನ ಕ್ಕೆ ವೃದ್ಧಿಸುತ್ತಲೇ ಇತ್ತು. ಮೊಲಗಳು ಮೊದಲೇ ತುಂಬ ಪುಕ್ಕಲು ಸ್ವಭಾವದ ಪ್ರಾಣಿಗಳು. ಒಂದು ಚೂರು ಸದ್ದಾ­ದರೂ ಹೆದರಿ ಓಡು­ವಂಥ ಜೀವಿಗಳು. ಒಂದು ಬಾರಿ ಮೊಲಗಳೆಲ್ಲ ಸಭೆ ಸೇರಿದ್ದಾಗ ಹಿರಿಯ ಮೊಲ­ವೊಂದು ಗಂಭೀರವಾಗಿ ಮಾತನಾಡಿತು, ‘ಬಂಧು­ಗಳೇ, ನಾವೆಲ್ಲ ಈ ಅರಣ್ಯದಲ್ಲಿ ಚೆನ್ನಾಗಿದ್ದೇವೆ ಎಂಬುದು ಒಂದು ಭಾವನೆ. ಆದರೆ, ನಿಜವಾಗಿ ನೋಡಿದರೆ ನಾವು ಇರುವಷ್ಟು ಆತಂಕದಲ್ಲಿ ಬೇರೆ ಯಾವ ಪ್ರಾಣಿಯೂ ಕಾಡಿನಲ್ಲಿ ಇರು­ವುದು ಸಾಧ್ಯವಿಲ್ಲ. ನಮ್ಮ ಸ್ವಭಾವವೇ ಪುಕ್ಕಲು. ನಾವು ಪಕ್ಕಾ ಸಸ್ಯಾಹಾರಿಗಳು, ಯಾರಿಗೂ ತೊಂದರೆ ಕೊಡುವವರಲ್ಲ.  ಆದರೆ, ಎಲ್ಲರೂ ನಮ್ಮ ಮೇಲೆ ಯಾಕೆ ಇಷ್ಟು ದ್ವೇಷ ಸಾಧಿಸುತ್ತಾರೋ ತಿಳಿ­ಯದು. ಮಾಂಸಾಹಾರಿಗಳಾದ ಪ್ರಾಣಿ­ಗಳು ನಮಗೋಸ್ಕರ ಕಾಯುತ್ತಿರುತ್ತವೆ. ಸಿಕ್ಕಸಿಕ್ಕಲ್ಲಿ ನಮ್ಮವರನ್ನು ಹೊಡೆದು ತಿನ್ನು­ತ್ತವೆ. ಇನ್ನೊಂದೆಡೆಗೆ ಬೇಟೆ­ಗಾ­ರರೂ ನಮ್ಮನ್ನೇ ಹುಡುಕಿಕೊಂಡು ಬರುತ್ತಾರೆ.  ಅಲ್ಲಲ್ಲಿ ಬಲೆ ಹಾಕಿ ನಮ್ಮನ್ನು ಹಿಡಿಯುತ್ತಾರೆ. ಸಿಕ್ಕವರನ್ನು ಹಿಡಿದುಕೊಂಡು ಹೋಗಿ ಕೆಲವರನ್ನು ಕೊಂದು ಮಾಂಸ ಮಾರುತ್ತಾರೆ. ಇನ್ನೂ ಕೆಲವರನ್ನು ಹಿಡಿದುಕೊಂಡು ಹೋಗಿ ಪಂಜರದಲ್ಲಿಟ್ಟು ಸಾಕುತ್ತಾರೆ. ಪಾಪ

ದಿನಕ್ಕೊಂದು ಕಥೆ. 626

*🌻ದಿನಕ್ಕೊಂದು ಕಥೆ🌻                                        ಅಮೂಲ್‌ ಜನಕನ ನೆನೆಯುತ್ತ...*                                     ಭಾರತದ ಡೈರಿ ಇತಿಹಾಸದಲ್ಲಿ 2014ರಿಂದ ಭಾರತದಾದ್ಯಂತ ಎಲ್ಲ ಪ್ರಮುಖವಾದ ಡೈರಿ ಸಂಘಟನೆಗಳು ಒಟ್ಟಿಗೆ ಸೇರಿ ನವೆಂಬರ್‌ ಇಪ್ಪತ್ತಾರನ್ನು ರಾಷ್ಟ್ರೀಯ ಹಾಲು ದಿನವನ್ನಾಗಿ ಭಾರತದ ಕ್ಷೀರ ಕ್ರಾಂತಿಯ ಪಿತಾಮಹರಾದ ಡಾ.ವರ್ಗೀಸ್‌ ಕುರಿಯನ್‌ ಅವರ ಹುಟ್ಟಿದ ಹಬ್ಬದ ಸ್ಮರಣೆಗೆ ಆಚರಿಸಲಾಗುತ್ತಿದೆ. ಸೆಪ್ಟೆಂಬರ್‌ 2012ರಲ್ಲಿ ತಮ್ಮ 90ನೆಯ ವಯಸ್ಸಿನಲ್ಲಿಈ ಮಹಾಪುರುಷ ದಿವಂಗತರಾದಾಗ ರಾಷ್ಟ್ರೀಯ ಡೈರಿ ಅಭಿವೃದ್ಧಿ ಬೋರ್ಡ್‌, ರಾಷ್ಟ್ರಿಯ ಡೈರಿ ಸಂಸ್ಥೆ, ಮತ್ತು 22 ರಾಜ್ಯಗಳ ಹಾಲು ಒಕ್ಕೂಟಗಳು ಇಡೀ ವಿಶ್ವದಲ್ಲಿ ಭಾರತ ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನ ಗಳಿಸುವಂತೆ ಮಾಡಿದ ಕ್ಷೀರ ಕ್ರಾಂತಿಯ ಹರಿಕಾರ ಡಾ. ಕುರಿಯನ್‌ರವರಿಗೆ ಭಾರತ ರತ್ನ ನೀಡಬೇಕೆಂದು ಒಕ್ಕೊರಲಿನಿಂದ ಒತ್ತಾಯ ಮಾಡಿದವು.ಬಡತನದ ಬೇಗೆಯಿಂದ ಬಸವಳಿದಿದ್ದ ಗ್ರಾಮೀಣ ಭಾಗದ ಜನತೆಗೆ ಬೆಳಕು ಮತ್ತು ಬದುಕನ್ನು ನೀಡಿದವರು ಡಾ. ವರ್ಗೀಸ್‌ ಕುರಿಯನ್‌. ಬಡತನ ನಿರ್ಮೂಲನೆಗೆ ಹೆಣೆದ ಸಾವಿರಾರು ಯೋಜನೆಗಳು ಯಶಸ್ಸು ನೀಡಲಿಲ್ಲ. ಇದಕ್ಕೆ ಹತ್ತು ಹಲವಾರು ಕಾರಣಗಳು ಇರಬಹುದು. ಇಂತಹಸಾವಿರಾರು ವಿಫಲ ಯೋಜನೆಗಳ ನಡುವೆಯೂ ಅಪವಾದವೆಂಬಂತೆ ಡಾ. ಕುರಿಯನ್‌ ಮತ್ತು ಅವರ ತಂಡದ ಅಮೂಲ್‌ ಮಾದರಿ ಹೈನುಗಾರಿಕೆ,ಹೊನಲು ಕಾರ್ಯಾಚರಣೆ ಪ್ರಚಂಡ ಯಶಸ್ಸನ್ನು ಕಂಡಿತು.