Posts

Showing posts from July, 2020

ದಿನಕ್ಕೊಂದು ಕಥೆ 984

ದಿನಕ್ಕೊಂದು ಕಥೆ 🙏ಇಂದಿನ ಐಕಾನ್ - ಆಧುನಿಕ ಸಾವಿತ್ರಿ ಲತಾ ಭಗವಾನ್ ಖರೆ.        ನನ್ನ ತರಬೇತಿಗಳಲ್ಲಿ ಅತೀ ಹೆಚ್ಚು ಸಲ ಬಳಸಿಕೊಂಡ ರಿಯಲ್ ಲೈಫ್ ಕಥೆಗಳಲ್ಲಿ ಇದು ಕೂಡ ಒಂದು. ಆಕೆ ಸಿನೆಮಾ ತಾರೆ ಅಥವಾ ಮಾಡೆಲ್ ಅಲ್ಲ. ಆದರೆ ಆಕೆಯ ಬದುಕಿನ ಹೋರಾಟ ಸಾವಿರಾರು ಮಂದಿಗೆ ಸ್ಫೂರ್ತಿ ತುಂಬಬಲ್ಲದು.        ಆಕೆ ಲತಾ ಭಗವಾನ್ ಖರೆ. ಆಕೆಯ ಗಂಡ ಭಗವಾನ್ ಖರೆ. ಮಹಾರಾಷ್ಟ್ರದ ಬುಲ್ದಾನ ಜೆಲ್ಲೆಯ ಒಂದು ಗ್ರಾಮದವರು. ಗಂಡನಿಗೆ 68 ವರ್ಷ ಮತ್ತು ಹೆಂಡತಿಗೆ 67 ವರ್ಷ. ಗಂಡ ಸುದೀರ್ಘ ವರ್ಷ ಸೆಕ್ಯುರಿಟಿ ಗಾರ್ಡ್ ಆಗಿದ್ದು ನಿವೃತ್ತಿ ಆಗಿದ್ದವರು. ಈಗ ಅವರಿಬ್ಬರೂ ಕೃಷಿಯ ದಿನಗೂಲಿ ನೌಕರರು. ಅವರಿಗೆ ಮೂರು ಜನ ಹೆಣ್ಣು ಮಕ್ಕಳು. ಮಕ್ಕಳಿಗೆ ಮದುವೆ ಮಾಡಿದ ಈ ದಂಪತಿ ತುಂಬಾ ಸಾಲ ಮಾಡಿದರು. ಮನೆಯನ್ನು ಮಾರಿ ಗುಡಿಸಲಲ್ಲಿ  ಇರಬೇಕಾಯಿತು. ದುಡಿದರೆ ಮಾತ್ರ ಅವರ ಹಸಿವು ನೀಗುತ್ತಿತ್ತು..ಬಹಳ ಕಷ್ಟದ ಸಮಯ ಅವರದ್ದು.        ಒಂದು ದಿನ ಗದ್ದೆಯಲ್ಲಿ ಕೃಷಿಯ ಕೆಲಸ ಮಾಡುವಾಗ ಗಂಡ ತಲೆ ತಿರುಗಿ ಬಿದ್ದು ಬಿಟ್ಟರು. ಹೆಂಡತಿಗೆ ತಕ್ಷಣ ಏನು ಮಾಡುವುದು ಎಂದು  ತೋಚಲಿಲ್ಲ. ಒಂದು ರಿಕ್ಷಾದಲ್ಲಿ ಗಂಡನನ್ನು ಹಾಕಿಕೊಂಡು ಪಕ್ಕದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದರು. ಅಲ್ಲಿನ ವೈದ್ಯರು ಪರೀಕ್ಷೆ ಮಾಡಿ ಏನೋ ಸೋಂಕು ಉಂಟಾಗಿದೆ. ನಮ್ಮಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ದೊಡ್ಡ ಆಸ್ಪತ್ರೆಗೆ ಹೋಗಿ ಎಂದರು.         ಗಂಡನನ್ನು ಮನೆಗೆ ಕರೆದು ತಂದ ಹೆಂಡತಿ ಕೆಲವು

ದಿನಕ್ಕೊಂದು ಕಥೆ 983

ದಿನಕ್ಕೊಂದು ಕಥೆ *ಸುಂದರ ಮನಸುಗಳು* 🌿🌿🌿🌿🌿🌿🌿🌿 ಒಂದು ಕ್ಲಾಸ್ ರೂಮ್ ನಲ್ಲಿ ಸುಮಾರು ವಿದ್ಯಾರ್ಥಿಗಳಿದ್ದರು. ಅವರಲ್ಲಿ ಒಬ್ಬ ಎದ್ದು ನಿಂತು ಪ್ರಾಧ್ಯಾಪಕರಿಗೆ ಹೇಳಿದ "ಸರ್ ನನ್ನ ತಂದೆ ನನ್ನ ಜನ್ಮ ದಿನಕ್ಕೆ ಒಂದು ದುಬಾರಿ ಗಡಿಯಾರವನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಈ  5 ನಿಮಿಷದ ಬ್ರೇಕ್ ನಲ್ಲಿ ಅದನ್ನು ಇಲ್ಲಿಯೇ ಬಿಟ್ಟು ಹೊರಗೆ ಹೋಗಿದ್ದೆ, ಬಂದು ನೋಡಿದರೆ ಕಾಣುತ್ತಿಲ್ಲ." ಆಗ ಪ್ರಾಧ್ಯಾಪಕರು ವಿಚಾರ ಮಾಡಲಾಗಿ ಈ ಹುಡುಗ ಹೊರಗೆ ಹೋಗಿ ಒಳಗೆ ಬರುವವರೆಗೆ ಕ್ಲಾಸ್ ರೂಮ್ ಒಳಗಿರುವ ಯಾವನೋ ಒಬ್ಬ ಕದ್ದಿರುತ್ತಾನೆ ಎಂದು ಊಹಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಎದ್ದು ನಿಲ್ಲಿಸಿ ತಮ್ಮ ತಮ್ಮ ಕರ್ಚೀಫಿನಿಂದ ತಮ್ಮ ಕಣ್ಣುಗಳನ್ನು ಕಟ್ಟಿಕೊಳ್ಳಲು ತಿಳಿಸಿದರು. ಒಬ್ಬೊಬ್ಬರನ್ನು  ಮೈಮುಟ್ಟಿ ಹುಡುಕುತ್ತಾ ಬಂದಾಗ ಒಬ್ಬನ ಜೇಬಿನಲ್ಲಿ ಅದು ಸಿಕ್ಕಿತು. ಅದನ್ನು ಕಳೆದುಕೊಂಡ ವಿದ್ಯಾರ್ಥಿಗೆ ಒಪ್ಪಿಸಿ, ಎಲ್ಲರಿಗೂ ಕಣ್ಣಿನ ಬಟ್ಟೆ  ತೆಗೆಯಲು ತಿಳಿಸಿದರು. ಎಂದಿನಂತೆ ಪಾಠ ಮುಂದುವರೆಯಿತು. ಆದರೆ ಗಡಿಯಾರ ಕದ್ದ ವಿದ್ಯಾರ್ಥಿಯ ಮನದಲ್ಲಿ ಭಯ, ಆತಂಕ ಶುರುವಾಗಿತ್ತು. ಇಂದೋ ನಾಳೆಯೋ ನಾನು ಕಳ್ಳ ಎಂದು ಎಲ್ಲರ ಮುಂದೆ ಬಹಿರಂಗವಾಗಿ ವಿಷಯ ತಿಳಿಸುತ್ತಾರೆ. ಆಗ ನನ್ನ ಗತಿ ಏನಾಗಬೇಕು ಎಂದು ಆತಂಕದಿಂದಲೇ ಕ್ಲಾಸಿಗೆ ಬರುತ್ತಿದ್ದ. ಹೀಗೆ ದಿನಗಳು ಕಳೆದು, ತಿಂಗಳುಗಳು ಕಳೆದು, ವರ್ಷವೇ ಕಳೆದು ಹೋಯಿತು. ಆ ವಿಷಯ ಯಾರಿಗೂ ಗೊತ್ತಾಗಲಿಲ್ಲ.

ದಿನಕ್ಕೊಂದು ಕಥೆ 982

ದಿನಕ್ಕೊಂದು ಕಥೆ ಕೃಪೆ:ಕನ್ನಡ_ಸಂಪದ #ಅಲ್ಲೂರಿ_ಸೀತಾರಾಮ_ರಾಜು ಜನನ --  ಜುಲೈ 4 1897  ಆದಿವಾಸಿಗಳ ಹಕ್ಕು ಕುರಿತಂತೆ ಈ ದೇಶದಲ್ಲಿ ಪ್ರಥಮ ಬಾರಿಗೆ ಧ್ವನಿ ಎತ್ತಿದ್ದು  ಉತ್ತರ ತೆಲಂಗಾಣದ ಅಲ್ಲೂರಿ ಸೀತಾರಾಮ ರಾಜು. ಅವರನ್ನು ಬ್ರಿಟಿಷ್ ಆಡಳಿತ 1924 ವರ್ಷದ ಮೇ 7 ರಂದು ಅಮಾನುಷ ರೀತಿಯಲ್ಲಿ ಕೊಂದುಹಾಕಿತು. ಇಂದಿನ ಬಸ್ತಾರ್ ಅರಣ್ಯ ಪ್ರದೇಶವೆಂದು ಕರೆಯುವ ಆಂಧ್ರ ಗಡಿ ಭಾಗದ ಅರಣ್ಯ ಸೇರಿದಂತೆ ಮಧ್ಯಪ್ರದೇಶ, ಒರಿಸ್ಸಾ, ಆಂಧ್ರದ ಗಡಿಭಾಗದ ಅರಣ್ಯದಲ್ಲಿ ವಾಸವಾಗಿರುವ ಚೆಂಚು ಎಂಬ ಬುಡಕಟ್ಟು ಜನಾಂಗದ ಪರವಾಗಿ 1920ರ ದಶಕದಲ್ಲಿ ಬ್ರಿಟಿಷರ ವಿರುದ್ಧ ಪ್ರಥಮ ಬಾರಿಗೆ ಧ್ವನಿ ಎತ್ತಿ ಹೋರಾಡಿ  ಹುತಾತ್ಮನಾದ ಸ್ವಾತಂತ್ರ್ಯ ಹೋರಾಟಗಾರ ಈ ಅಲ್ಲೂರಿ ಸೀತಾರಾಮ ರಾಜು. 1897 ರ ಜುಲೈ 4 ರಂದು ವಿಶಾಖಪಟ್ಟಣ ಜಿಲ್ಲೆಯ ಪಂಡುರಂಗಿ ಎಂಬ ಗ್ರಾಮದದಲ್ಲಿ ಜನಿಸಿದ ರಾಜುವಿನ ತಂದೆ ಆಗಿನ ಬ್ರಿಟಿಷ್ ಆಳ್ವಿಕೆಯ ಸರ್ಕಾರದಲ್ಲಿ ರಾಜಮಂಡ್ರಿ ಸರೆಮನೆಯಲ್ಲಿ ಪೋಟೊಗ್ರಾಪರ್ ಆಗಿ ಕೆಲಸಮಾಡುತಿದ್ದರು.  ಅಲ್ಲೂರಿ ಸೀತಾರಾಮ ರಾಜು ಬಾಲ್ಯದಿಂದಲೇ ತಮ್ಮ ತಂದೆಯಿಂದ ಆತ್ಮಗೌರವ, ಪರೋಪಕಾರ ಮುಂತಾದ ಗುಣಗಳನ್ನು ಕಲಿತಿದ್ದರು. ಪುಟ್ಟ ಬಾಲಕನಾಗಿದ್ದಾಗ ಇವರು ಒಮ್ಮೆ ಆಂಗ್ಲ ಅಧಿಕಾರಿಗೆ ಸೆಲ್ಯೂಟ್ ಹೊಡೆದಿದ್ದಕ್ಕೆ ತಮ್ಮ ತಂದೆಯಿಂದ ಪೆಟ್ಟುತಿಂದು, ದೇಶವನ್ನಾಕ್ರಮಿಸಿ ಆಡಳಿತ ನಡೆಸುವ ಆಂಗ್ಲರು ತಮ್ಮ ಶತ್ರುಗಳು ಎಂಬುದನ್ನರಿತರು. ಇವರ ತಂದೆ ವೆಂಕಟರಾಮರಾಜು ಮಹಾ ದೇಶಭಕ್ತರಾಗಿ