ದಿನಕ್ಕೊಂದು ಕಥೆ 1043

*🌻ದಿನಕ್ಕೊಂದು ಕಥೆ🌻*
*ನಮಸ್ಕಾರದ ಪ್ರಾಮುಖ್ಯತೆ*

       ಮಹಾಭಾರತದ ಯುದ್ಧ ನಡೆಯುತ್ತಿತ್ತು -
     ಒಂದು ದಿನ, ದುರ್ಯೋಧನನ ವ್ಯಂಗ್ಯ ವಿಡಂಬನೆಯಿಂದ ನೊಂದ  ಭೀಷ್ಮ ಪಿತಾಮಹ ಹೀಗೆ ಘೋಷಿಸುತ್ತಾನೆ .

       *"ನಾನು ನಾಳೆ ಪಾಂಡವರನ್ನು ಕೊಲ್ಲುತ್ತೇನೆ"*

        ಅವರ ಘೋಷಣೆ ಬಂದ ಕೂಡಲೇ ಪಾಂಡವರ ಶಿಬಿರದಲ್ಲಿ ಆತಂಕ ಹೆಚ್ಚಾಯಿತು -

    ಭೀಷ್ಮನ ಸಾಮರ್ಥ್ಯಗಳ ಬಗ್ಗೆ ಎಲ್ಲರಿಗೂ ತಿಳಿದಿತ್ತು, ಆದ್ದರಿಂದ ಪ್ರತಿಯೊಬ್ಬರೂ ಕೆಟ್ಟದ್ದರ ಸಾಧ್ಯತೆಯ ಬಗ್ಗೆ ಚಿಂತೆ ಮಾಡಿದರು. ನಂತರ -
  ಶ್ರೀ ಕೃಷ್ಣ ದ್ರೌಪದಿ ಗೆ, ಈಗ ನನ್ನೊಂದಿಗೆ ಬಾ -

ಶ್ರೀಕೃಷ್ಣನು ದ್ರೌಪದಿಯೊಂದಿಗೆ ನೇರವಾಗಿ ಭೀಷ್ಮ ಪಿತಾಮಹನ ಶಿಬಿರವನ್ನು ತಲಿಪಿದನು -

  ಶಿಬಿರದ ಹೊರಗೆ ನಿಂತು ದ್ರೌಪದಿ ಗೆ – *“ಒಳಗೆ ಹೋಗಿ, ಅಜ್ಜನಿಗೆ ನಮಸ್ಕರಿಸು.”* ಎಂದು ಹೇಳಿದರು

      ದ್ರೌಪದಿ ಒಳಗೆ ಹೋಗಿ ಪಿತಾಮಹ ಭೀಷ್ಮನಿಗೆ ನಮಸ್ಕರಿಸಿದಾಗ -    *"ಅಖಂಡ ಸೌಭಾಗ್ಯವತಿ ಭವ"* ಎಂದು ಆಶೀರ್ವದಿಸಿದ ಅವರು ನಂತರ ದ್ರೌಪದಿಯನ್ನು ಕೇಳಿದರು !!

   *"ಮಗಳೇ, ಇಂತಹ ರಾತ್ರಿಯಲ್ಲಿ ನೀನು ಏಕಾಂಗಿಯಾಗಿ ಇಲ್ಲಿಗೆ ಹೇಗೆ ಬಂದಿದ್ದೀ, ಶ್ರೀ ಕೃಷ್ಣ ಅವರು ನಿನ್ನನ್ನು ಇಲ್ಲಿಗೆ  ಕರೆತಂದಿದ್ದಾರಾ"?*
ಆಗ ದ್ರೌಪದಿ ಹೀಗೆ ಹೇಳಿದಳು -
     *"ಹೌದು,ಅವರು ಕೋಣೆಯ ಹೊರಗೆ ನಿಂತಿದ್ದಾರೆ"* ನಂತರ ಭೀಷ್ಮನು ಸಹ ಕೋಣೆಯಿಂದ ಹೊರಬಂದನು ಮತ್ತು ಇಬ್ಬರೂ ಪರಸ್ಪರ ನಮಸ್ಕರಿಸಿದರು. *"ನನ್ನ ಒಂದು ವಚನವನ್ನು ನನ್ನ ಇನ್ನೊಂದು ವಚನದಿಂದ ಮುರಿದು ಹಾಕಲು  ಶ್ರೀ ಕೃಷ್ಣನಿಂದ ಮಾತ್ರ ಸಾಧ್ಯ"* ಭೀಷ್ಮ ಪಿತಾಮಹ ಹೀಗೆ ಹೇಳಿದನು.

   ಶಿಬಿರದಿಂದ ಹಿಂದಿರುಗುವಾಗ, ಶ್ರೀ ಕೃಷ್ಣನು ದ್ರೌಪದಿಗೆ ಹೀಗೆ ಹೇಳಿದನು -

     "ಒಮ್ಮೆ ನೀನು ಹೋಗಿ ಅಜ್ಜನಿಗೆ ಗೌರವ ಸಲ್ಲಿಸಿದ್ದಕ್ಕೇ, ನಿನ್ನ ಪತಿಯಂದಿರಿಗೆ ಜೀವನ ಸಿಕ್ಕಿದೆ".

  *"ಇನ್ನು ನೀನು ಭೀಷ್ಮ, ಧೃತರಾಷ್ಟ್ರ, ದ್ರೋಣಾಚಾರ್ಯ ಇತ್ಯಾದಿ ಹಿರಿಯರಿಗೆ ಪ್ರತಿದಿನ ನಮಸ್ಕಾರ ಮಾಡುತ್ತಿದ್ದರೆ, ಮತ್ತು ದುರ್ಯೋಧನ - ದುಷ್ಯಾಸನಾದಿಗಳ ಪತ್ನಿಯರು ಸಹ ಪಾಂಡವರಿಗೆ ನಮಸ್ಕಾರ ಮಾಡುತ್ತಿದ್ದರೆ, ಬಹುಶಃ ಈ ಯುದ್ಧವು ಆಗುತ್ತಿರಲಿಲ್ಲ"*

 ಅಂದರೆ ,

ಪ್ರಸ್ತುತ ನಮ್ಮ ಮನೆಗಳಲ್ಲಿ ಅನೇಕ ಸಮಸ್ಯೆಗಳಿಗೆ ಮೂಲ ಕಾರಣವೆಂದರೆ -

    *"ತಿಳಿಯದೆ ಆಗಾಗ್ಗೆ ಮನೆಯ ಹಿರಿಯರನ್ನು ಕಡೆಗಣಿಸಲಾಗುತ್ತದೆ"*

    *"ಮನೆಯ ಮಕ್ಕಳು ಮತ್ತು ಸೊಸೆಯಂದಿರು ಪ್ರತಿದಿನ ಮನೆಯ ಎಲ್ಲಾ ಹಿರಿಯರಿಗೆ ನಮಸ್ಕರಿಸಿ ಅವರ ಆಶೀರ್ವಾದವನ್ನು ತೆಗೆದುಕೊಂಡರೆ, ಯಾವುದೇ ಮನೆಯಲ್ಲಿ ಎಂದಿಗೂ ಕ್ಲೇಶಗಳು ಉಂಟಾಗುವುದಿಲ್ಲ"*

     ಹಿರಿಯರು ನೀಡಿದ ಆಶೀರ್ವಾದಗಳು ರಕ್ಷಾಕವಚವಾಗಿ ಕಾರ್ಯನಿರ್ವಹಿಸುತ್ತವೆ; *ಈ ರಕ್ಷಾಕವಚವನ್ನು ಯಾವುದೇ "ಆಯುಧ" ಭೇದಿಸಲು ಸಾಧ್ಯವಿಲ್ಲ*.

    "ವಿನಯದಿಂದ ಪ್ರತಿಯೊಬ್ಬರೂ ಈ ಸಂಸ್ಕೃತಿಯನ್ನು ಪಾಲಿಸಿದರೆ, ನಿಯಮ ಬದ್ಧವಾಗಿ ಮಾಡಿದರೆ ಆ ಮನೆ ಸ್ವರ್ಗವಾಗುತ್ತದೆ."

   ಏಕೆಂದರೆ ,
  *ನಮಸ್ಕಾರ ಪ್ರೀತಿ,*
   *ನಮಸ್ಕಾರ ಶಿಸ್ತು,*
   *ನಮಸ್ಕಾರ ಶೀತಲತೆ.*
   *ನಮಸ್ಕಾರ ಗೌರವವನ್ನು*  
          *ಕಲಿಸುತ್ತವೆ.*
    *ನಮಸ್ಕಾರದಿಂದ ಸುವಿಚಾರ*    
                *ಬರುತ್ತದೆ.*
     *ನಮಸ್ಕಾರ ಬಾಗುವುದನ್ನು*      
                  *ಕಲಿಸುತ್ತದೆ.*
      *ನಮಸ್ಕಾರ ಕೋಪವನ್ನು*
                   *ಅಳಿಸುತ್ತದೆ.*
      *ನಮಸ್ಕಾರ ಅಹಂ ಅನ್ನು* 
                   *ಅಳಿಸುತ್ತದೆ.*
                *ನಮಸ್ಕಾರ ನಮ್ಮ*
                      *ಸಂಸ್ಕೃತಿ*
                *ನಮಸ್ಕಾರ ನಮ್ಮ* ‌           ‌     *ಸಂಸ್ಕಾರವನ್ನು ತಿಳಿಸುತ್ತದೆ*...
*ಅಬ್ಬಬ್ಬಾ ಎಂತಹ ಸಮೃದ್ಧವಾಗಿದೆ ನಮ್ಮ ಹೆಮ್ಮೆಯ ಸನಾತನ ಧರ್ಮ*

ಕೃಪೆ: ಪ್ರಗತಿಪರ ಶಿಕ್ಷಕರ ವೇದಿಕೆ
ಹರಪನಹಳ್ಳಿ
ಸಂಗ್ರಹ :ವೀರೇಶ್ ಅರಸೀಕೆರೆ

Comments

Popular posts from this blog

ದಿನಕ್ಕೊಂದು ಕಥೆ 1031

ದಿನಕ್ಕೊಂದು ಕಥೆ 1055

ದಿನಕ್ಕೊಂದು ಕಥೆ 1059